ಪವನ್ ಕಲ್ಯಾಣ ರಲ್ಲಿ ಕ್ಷಮೆ ಕೋರಿದ ನಟಿ ಶ್ರೀರೆಡ್ಡಿ

ಶುಕ್ರವಾರ, 20 ಏಪ್ರಿಲ್ 2018 (16:01 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ಶ್ರೀರೆಡ್ಡಿ ಇತ್ತೀಚೆಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದೀಗ  ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.


ನಟಿ ಶ್ರೀರೆಡ್ಡಿ ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ,’ ಪವನ್ ಕಲ್ಯಾಣ್ ಹಾಗೂ ಅವರ ತಾಯಿಯ ಬಗ್ಗೆ ನಾನು ನೀಡಿದ್ದ ಹೇಳಿಕೆಗಳಿಗೆ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತಿದ್ದೇನೆ. ಅನಾವಶ್ಯಕವಾಗಿ ಅನೇಕರಿಂದ ನಾನು ನಿಂದನೆಗೆ ಒಳಗಾಗಿದ್ದೇನೆ. ನಾನು ಹೀಗೆ ಮಾಡಲು ನಿಮ್ಮ ಶತ್ರುಗಳು ನನಗೆ ಪ್ರಚೋದನೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವಳಲ್ಲ. ನೀವು ಮತ್ತು ನಿಮ್ಮ ಅಭಿಮಾನಿಗಳು ಈ ಬಗ್ಗೆ ಗಮನಿಸಬೇಕು. ಟ್ರೋಲ್ ಮಾಡುತ್ತಿರುವುದನ್ನ ನಾನು ಎದುರಿಸುತ್ತೇನೆ. ಯಾಕಂದ್ರೆ, ಅದು ನಾನು ಮಾಡಿದ ತಪ್ಪು ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ