ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಅವರಲ್ಲಿ ಕ್ಷಮೆ ಕೇಳಿದ್ದಾದರೂ ಯಾಕೆ?

ಮಂಗಳವಾರ, 20 ಮಾರ್ಚ್ 2018 (06:22 IST)
ಮುಂಬೈ : ನಿದಾಸ್ ತ್ರಿಕೋನ ಟಿ20 ಸರಣಿಯಲ್ಲಿ ಬಾಂಗ್ಲಾ ದೇಶದ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರು ಉತ್ತಮ ಪ್ರದರ್ಶನ  ನೀಡಿದ ಹಿನ್ನಲೆಯಲ್ಲಿ ಎಲ್ಲಾ ಸ್ಟಾರ್ ಗಳಂತೆ ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಕೂಡ ದಿನೇಶ್ ಕಾರ್ತಿಕ್ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿದ್ದು, ಆದರೆ ಮತ್ತೊಂದು ಟ್ವೀಟ್ ಮಾಡಿ ಅವರಲ್ಲಿ ಕ್ಷಮೆ ಕೇಳಿದ್ದಾರೆ.


ಅವರು ಈ ರೀತಿ ಮಾಡಲು ಕಾರಣವೆನೆಂದರೆ ಅವರು ಮೊದಲನೇಯ ಟ್ವೀಟ್ ಅನ್ನು ತಪ್ಪಾಗಿ ಟೈಪ್ ಮಾಡಿದ್ದರು. ಅಂದರೆ ಅವರು ಮೊದಲಬಾರಿ ಎರಡು ಓವರ್ ಗಳಲ್ಲಿ 24 ರನ್ ಗಳಿಸಬೇಕಿತ್ತು. ದಿನೇಶ್ ಕಾರ್ತಿಕ್ ಬ್ರಿಲಿಯಂಟ್ ನಾಕ್. ಒಂದು ಎಸೆತದಲ್ಲಿ 5 ರನ್ ಗಳಿಸಬೇಕಾದ ವೇಳೆ ಸಿಕ್ಸ್ ಸಿಡಿಸಿದ್ದಾರೆ. ನಿಮಗೇ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದರು. ಆದರೆ ಅವರು ಈ ಟ್ವೀಟ್ ನಲ್ಲಿ 34 ರನ್ ಬದಲಾಗಿ 24 ರನ್ ಎಂದು ಬರೆದಿದ್ದರು. ನಂತರ ತಾವು ಮಾಡಿರುವ ತಪ್ಪನ್ನು ತಿಳಿದು ಇನ್ನೊಂದು ಟ್ವೀಟ್ ಮೂಲಕ `ದಿನೇಶ್ ಕಾರ್ತಿಕ್ ಸಾರಿ’ ಎಂದು ಬರೆದಿದ್ದಾರೆ. ತಾವು ಮಾಡಿದ ಚಿಕ್ಕ ತಪ್ಪಿಗೆ ಕ್ಷಮೆ ಯಾಚಿಸಿದ ಅಮಿತಾಬ್ ಅವರ ಈ ಗುಣಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ