ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರಗೊಂಡಿದ್ಯಾಕೆ?

ಶುಕ್ರವಾರ, 4 ಮೇ 2018 (06:57 IST)
ಹೈದರಾಬಾದ್ : ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಟಿ ಅನುಷ್ಕಾ ಅವರು ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ವಾಸ್ತವ್ಯ ಹೂಡಿದ್ದು, ಬೆಳಗಿನ ಜಾವ 4 ಗಂಟೆಗೆ 17 ಕಿಲೋ ಮೀಟರ್ ದೂರದಲ್ಲಿರುವ ಕೇದಾರನಾಥ ದೇವಾಲಯಕ್ಕೆ ಕಾಲ್ನಡಿಗೆಯಲ್ಲೇ ಸಾಗಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಹೊರ ಬಂದ ಬಳಿಕ ಅಭಿಮಾನಿಗಳು ಅನುಷ್ಕಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಮೊದಲಿಗೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಿದ್ದ ಅನುಷ್ಕಾ ಅವರು ನಂತರ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಿ ಭದ್ರತೆ ಸಮಸ್ಯೆ ಕಾರಣಕ್ಕೆ ತಾಳ್ಮೆ ಕಳೆದುಕೊಂಡು ಅಲ್ಲಿಂದ ಹೊರಟಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಅವರ ಮೇಲೆ ಬೇಸರಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ