ಕೃಷ್ಣಮೃಗಗಳ ಬೇಟೆ ಪ್ರಕರಣ ; ಸಲ್ಮಾನ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜೋಧ್‌ಪುರ ನ್ಯಾಯಾಲಯ

ಮಂಗಳವಾರ, 8 ಮೇ 2018 (07:02 IST)
ಜೋಧ್ಪುರ : ಕೃಷ್ಣಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ ಜೈಲು ಶಿಕ್ಷೆಯನ್ನು ರದ್ದುಪಡಿಸಬೇಕು ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸಲ್ಲಿಸಿದ  ಅರ್ಜಿಯ ವಿಚಾರಣೆಯನ್ನು ಜೋಧ್‌ಪುರ ನ್ಯಾಯಾಲಯ ಜುಲೈ 17ಕ್ಕೆ ಮುಂದೂಡಿದೆ.


ಕೃಷ್ಣಮೃಗಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್‌ಖಾನ್‌ ದೋಷಿ ಎಂದು ಘೋಷಿಸಿದ್ದ ಕೋರ್ಟ್‌, ಐದು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಎರಡು ದಿನಗಳ ಸೆರೆವಾಸ ಅನುಭವಿಸಿದ್ದ ಸಲ್ಮಾನ್ ,ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಮಾನ್‌ಖಾನ್‌ ಪರ ವಕೀಲರು ಜೋಧ್‌ಪುರ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಸೋಮವಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಚಂದ್ರ ಕುಮಾರ್ ಸೊಂಗರ ಕೈಗೆತ್ತಿಗೊಂಡಾಗ ಸಲ್ಮಾನ್ ಪರ ವಕೀಲರು ಸಮಯಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ