ಕೊರೊನಾ ಭೀತಿ ಹಿನ್ನಲೆ; ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ

ಸೋಮವಾರ, 23 ಮಾರ್ಚ್ 2020 (10:30 IST)
ಬೆಂಗಳೂರು : ಮಹಾಮಾರಿ ಕೊರೊನಾ ಶೋಂಕು ಹರಡುವ ಭೀತಿ ಹಿನ್ನಲೆ ವಿಧಾನ ಮಂಡಲ ಅಧಿವೇಶನ ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ರುದ್ರತಾಂಡವ ಆಡುತ್ತಿರುವ ಕಾರಣ ಬೆಂಗಳೂರನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದಕಾರಣ ಇಂದು  ನಡೆಯಬೇಕಿದ್ದ  ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆ ಸ್ಪೀಕರ್ ತೀರ್ಮಾನ ಮಾಡಿದ್ದಾರೆ. ವಿಪಕ್ಷ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ