ಏಷ್ಯಾ ಕಪ್ ಕ್ರಿಕೆಟ್: ಟಾಸ್ ನಲ್ಲಿ ಶ್ರೀಲಂಕಾಗೆ ಗೆಲುವು

ಮಂಗಳವಾರ, 6 ಸೆಪ್ಟಂಬರ್ 2022 (19:06 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಸೂಪರ್ ಫೋರ್ ಪಂದ್ಯವಾಡುತ್ತಿರುವ ಭಾರತಕ್ಕೆ ಇಂದು ಶ್ರೀಲಂಕಾ ಎದುರಾಳಿಯಾಗಿದೆ.

ಶ್ರೀಲಂಕಾ ಟಾಸ್ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದುವರೆಗೆ ಇಲ್ಲಿ ನಡೆದಿರುವ ಪಂದ್ಯಗಳಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಮಾಡಿದ ತಂಡವೇ ಮೇಲುಗೈ ಸಾಧಿಸಿದೆ. ಹೀಗಾಗಿ ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ಕೃಷ್ಟ ಪ್ರದರ್ಶನ ನೀಡಬೇಕಿದೆ.

ಈ ಪಂದ್ಯಕ್ಕೆ ಭಾರತ ಕೆಲವು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ರವಿ ಬಿಷ್ಣೋಯ್ ರನ್ನು ಹೊರಗಿಡಲಾಗಿದ್ದು, ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ನೀಡಲಾಗಿದೆ. ವೇಗಿ ಆವೇಶ್ ಖಾನ್ ಈ ಪಂದ್ಯದಲ್ಲೂ ಆಡುತ್ತಿಲ್ಲ. ಉಳಿದಂತೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಅರ್ಷ್ ದೀಪ್ ಸಿಂಗ್ ತಂಡದಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ