ಆಸೀಸ್ ಸರಣಿಗೆ ಮೊದಲು ಕ್ರಿಕೆಟಿಗರಿಗೆ ಖಡಕ್ ಸೂಚನೆ ಕೊಟ್ಟ ಬಿಸಿಸಿಐ

ಗುರುವಾರ, 23 ಫೆಬ್ರವರಿ 2023 (09:50 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಬಳಿಕ ಏಕದಿನ ಸರಣಿ ನಡೆಯಲಿದೆ. ಈ ಸರಣಿಗೆ ಈಗಾಗಲೇ ಟೀಂ ಇಂಡಿಯಾ ಘೋಷಣೆಯಾಗಿದೆ.

ಮೊದಲ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಲಿದ್ದಾರೆ. ಆದರೆ ಈ ಸರಣಿಗೆ ಮೊದಲು ಬಿಸಿಸಿಐ ಆಟಗಾರರಿಗೆ ಖಡಕ್ ಸೂಚನೆ ಕೊಟ್ಟಿದೆ.

ಏಕದಿನ ಸರಣಿಗೆ ಆಯ್ಕೆಯಾಗಿರುವ ಕ್ರಿಕೆಟಿಗರು ಸರಣಿಗೆ ಮುನ್ನ ಕಡ್ಡಾಯವಾಗಿ ಫಿಟ್ನೆಸ್ ಸರ್ಟಿಫಿಕೇಟ್ ತರಲು ಸೂಚನೆ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್ ಮೊದಲಾದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳದ ಆಟಗಾರರು ಫಿಟ್ನೆಸ್ ಸರ್ಟಿಫಿಕೇಟ್ ಹಾಜರುಪಡಿಸಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ