Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು
ಹೋಟೆಲ್ ನಿಂದ ಆರ್ ಸಿಬಿ ತಂಡ ವಿಧಾನಸೌಧಕ್ಕೆ ಬರುತ್ತಿದ್ದಂತೇ ಸಾಕಷ್ಟು ಜನ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ಹರ್ಷೋದ್ಘಾರ ಮಾಡುತ್ತಿದ್ದರು. ಒಂದು ವೇಳೆ ಓಪನ್ ಬಸ್ ಮೆರವಣಿಗೆ ಇದ್ದಿದ್ದರೆ ಜನರನ್ನು ನಿಯಂತ್ರಿಸಲೂ ಸಾಧ್ಯವಿರುತ್ತಿರಲಿಲ್ಲ.
ಆರ್ ಸಿಬಿ ಕನಿಷ್ಠ ವಿಧಾನಸೌಧದಿಂದ ಚಿನ್ನಸ್ವಾಮಿಯವರೆಗಾದರೂ ಮೆರವಣಿಗೆಗೆ ಅವಕಾಶ ಕೇಳಿತ್ತು. ಆದರೆ ಭದ್ರತೆ ದೃಷ್ಟಿಯಿಂದ ಸಾಧ್ಯವಿಲ್ಲ ಎಂದು ಸರ್ಕಾರ ನಿರಾಕರಿಸಿತ್ತು. ಒಂದು ವೇಳೆ ಮೆರವಣಿಗೆ ಮಾಡಿದ್ರೆ ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಿತ್ತು.