ಆದರೆ ಆಗ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು. ಹೀಗಾಗಿ ಯಾವುದೇ ದುರಂತ ಸಂಭವಿಸಿರಲಿಲ್ಲ. ಯಾಕೆಂದರೆ ಅಂದು ಆಟಗಾರರ ಮೆರವಣಿಗೆ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ದಿನಗಳ ಮೊದಲೇ ಮಾಹಿತಿಯಿತ್ತು. ಹೀಗಾಗಿ ಪೊಲೀಸರಿಗೂ ತಯಾರಿ ನಡೆಸಲು ಸಾಕಷ್ಟು ಅವಕಾಶ ಸಿಕ್ಕಿತ್ತು. ಇಲ್ಲೂ ತಯಾರಿ ನಡೆಸಲು ಅವಕಾಶ ನೀಡಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಈಗ ಚಿನ್ನಸ್ವಾಮಿ ಮೈದಾನದಲ್ಲಿ ವ್ಯವಸ್ಥೆ ಮಾಡಲು ಸಮಯದ ಕೊರತೆಯಿಂದಲೇ ಈ ದುರಂತ ಸಂಭವಿಸಿದೆ.