ಟೀಂ ಇಂಡಿಯಾ ಟಿ20 ತಂಡಕ್ಕೆ ಧೋನಿ ಕಮ್ ಬ್ಯಾಕ್?!

ಬುಧವಾರ, 16 ನವೆಂಬರ್ 2022 (10:32 IST)
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಸೋಲಿನ ಬಳಿಕ ಟೀಂ ಇಂಡಿಯಾಕ್ಕೆ ಮೇಜರಿ ಸರ್ಜರಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.

ಕೋಚ್ ರಾಹುಲ್ ದ್ರಾವಿಡ್ ಬಗ್ಗೆಯೂ ಟೀಕೆ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ದ್ರಾವಿಡ್ ಗೆ ಟಿ20 ಕ್ರಿಕೆಟ್ ನ ಕೋಚ್ ಹುದ್ದೆಯಿಂದ ಮುಕ್ತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ.

ಆ ಸ್ಥಾನಕ್ಕೆ ಟೀಂ ಇಂಡಿಯಾ ಯಶಸ್ವೀ ನಾಯಕ ಧೋನಿಯನ್ನು ಕರೆತರಲು ಯೋಜನೆ ರೂಪಿಸಲಾಗಿದೆ. ಧೋನಿ ಯುವ ಆಟಗಾರರನ್ನು ಪಳಗಿಸುವುದರಲ್ಲಿ ನಿಸ್ಸೀಮ. ಅಲ್ಲದೆ ಕಿರು ಮಾದರಿಯಲ್ಲಿ ಅವರು ಸಾಕಷ್ಟು ಯಶಸ್ಸು ಕಂಡಿದ್ದಾರೆ. ಹೀಗಾಗಿ ಧೋನಿಯನ್ನು ಟಿ20 ತಂಡದ ನಿರ್ದೇಶಕರಾಗಿ ಮಾಡಲು ಬಿಸಿಸಿಐ ಪ್ರಯತ್ನ ನಡೆಸಿದೆಯಂತೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ