ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಬೇಕಿದ್ದರೆ ಧೋನಿ ಈ ಕೆಲಸ ಮಾಡಲೇಬೇಕು!

ಶುಕ್ರವಾರ, 14 ಡಿಸೆಂಬರ್ 2018 (09:34 IST)
ರಾಂಚಿ: ಸೀಮಿತ ಓವರ್ ಗಳ ವಿಕೆಟ್ ಕೀಪರ್ ಧೋನಿ ಇದೀಗ ಟೀಂ ಇಂಡಿಯಾದಿಂದ ಬ್ರೇಕ್ ನಲ್ಲಿದ್ದು, ಅವರು ಮತ್ತೆ ತಂಡಕ್ಕೆ ಆಯ್ಕೆಯಾಗಬೇಕಾದರೆ ದೇಶೀಯ ಕ್ರಿಕೆಟ್ ಆಡಲೇಬೇಕು ಎಂಬ ಒತ್ತಾಯಗಳು ಹೆಚ್ಚುತ್ತಿವೆ.


ಧೋನಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೂ ಆಯ್ಕೆಯಾಗಿರಲಿಲ್ಲ. ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ಟೀಕೆ ಕೇಳಿಬರುತ್ತಿದೆ. ಹೀಗಾಗಿ ಅವರು ತಂಡಕ್ಕೆ ಮತ್ತೆ ಆಯ್ಕೆಯಾಗಬೇಕಾದರೆ ರಣಜಿ ಟ್ರೋಫಿಯಂತಹ ದೇಶೀಯ ಕ್ರಿಕೆಟ್ ನಲ್ಲಿ ಆಡಿ ತಮ್ಮ ಫಾರ್ಮ್ ಸಾಬೀತುಪಡಿಸಬೇಕು ಎಂದು ಮಾಜಿ ಕ್ರಿಕೆಟಿಗ ಮೊಹಿಂದರ್ ಅಮರನಾಥ್ ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಧೋನಿ ಜತೆಗೆ ಕಳಪೆ ಫಾರ್ಮ್ ನಿಂದ ತಂಡಕ್ಕೆ ಆಯ್ಕೆಯಾಗದ ಇನ್ನೊಬ್ಬ ಕ್ರಿಕೆಟಿಗ ಶಿಖರ್ ಧವನ್ ಕೂಡಾ ರಣಜಿಯಲ್ಲಿ ಆಡಿ ಸಾಮರ್ಥ್ಯ ಸಾಬೀತುಪಡಿಸಬೇಕು. ಬೇರೆ ಕ್ರಿಕೆಟಿಗರಿಗೆ ಅನ್ವಯವಾಗುವ ನಿಯಮ ಇವರಿಗೂ ಅನ್ವಯವಾಗಬೇಕು ಎಂದು ಈ ಹಿರಿಯ ಕ್ರಿಕೆಟಿಗರು ಒತ್ತಾಯಿಸಿದ್ದಾರೆ.

ಈ ಹಿಂದೆ ಆಯ್ಕೆ ಸಮಿತಿ ಕೂಡಾ ಧೋನಿಗೆ ದೇಶೀಯ ಕ್ರಿಕೆಟ್ ನಲ್ಲಿ ಆಡಲು ಸೂಚಿಸಿತ್ತಾದರೂ, ಧೋನಿ ಅದನ್ನು ಕಡೆಗಣಿಸಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ