ಬೆಂಗಳೂರಿನ ಆಸ್ಪತ್ರೆಗೆ ದಾಖಲಾದರೇ ಗಂಗೂಲಿ? ನಿಜಾಂಶ ಬಯಲು

ಶನಿವಾರ, 12 ಫೆಬ್ರವರಿ 2022 (10:20 IST)
ಬೆಂಗಳೂರು: ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ.ದೇವಿ ಪ್ರಸಾದ್ ಶೆಟ್ಟಿ ಬಳಿ ಹೃದಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳಾಗಿತ್ತು. ಈ ಬಗ್ಗೆ ನಾರಾಯಣ ಹೃದಯಾಲಯ ಆಸ್ಪತ್ರೆ ಸ್ಪಷ್ಟನೆ ನೀಡಿದೆ.

ಗಂಗೂಲಿ ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿದ್ದರು. ಅದಾದ ಬಳಿಕ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದರು. ಈ ಹಿನ್ನಲೆಯಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆಗೆ ಬೆಂಗಳೂರಿಗೆ ಬಂದಿದ್ದಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳಾಗಿತ್ತು.

ಈ ಬಗ್ಗೆ ನಾರಾಯಣ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ‘ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದು ಸುಳ್ಳು ಸುದ್ದಿ. ಡಾ. ದೇವಿ ಪ್ರಸಾದ್ ಶೆಟ್ಟಿಯವರನ್ನು ಭೇಟಿಯಾಗಲು ಆಸ್ಪತ್ರೆಗೆ ಬಂದಿದ್ದರಷ್ಟೆ. ಸೋಮವಾರ ಗಂಗೂಲಿ 100 ಬೆಡ್ ಗಳ ಐಸಿಯು ಯೂನಿಟ್ ನ್ನು ಉದ್ಘಾಟಿಸಲಿದ್ದಾರೆ’ ಎಂದು ಪ್ರಕಟಣೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ