ಧೋನಿಯನ್ನು ತಂಡದಿಂದ ಕೈಬಿಟ್ಟ ಬಗ್ಗೆ ಕೊನೆಗೂ ಬಾಯ್ಬಿಟ್ಟ ವಿರಾಟ್ ಕೊಹ್ಲಿ

ಶುಕ್ರವಾರ, 2 ನವೆಂಬರ್ 2018 (09:31 IST)
ಮುಂಬೈ: ಮುಂಬರುವ ಟಿ20 ಸರಣಿಗೆ ಹಿರಿಯ ಕ್ರಿಕೆಟಿಗ ಧೋನಿಯನ್ನು ತಂಡದಿಂದ ಕೈ ಬಿಟ್ಟ ಬಗ್ಗೆ ಕೊನೆಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಪ್ರತಿಕ್ರಿಯಿಸಿದ್ದಾರೆ.

ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಹೊಸಬರನ್ನು ತಯಾರು ಮಾಡಲು ಧೋನಿಯನ್ನು ಕೈ ಬಿಟ್ಟಿರುವುದಾಗಿ ಈಗಾಗಲೇ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದರು.

ಇದೀಗ ಸುದ್ದಿಗೋಷ್ಠಿಯಲ್ಲಿ ನಾಯಕ ಕೊಹ್ಲಿ ಎದುರು ಇದೇ ಪ್ರಶ್ನೆ ಬಂದಾಗ ಉತ್ತರಿಸಿದ ಅವರು ‘ಈಗಾಗಲೇ ಆಯ್ಕೆ ಸಮಿತಿಯವರು ಈ ವಿಚಾರದ ಬಗ್ಗೆ ನಿಮಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗಿರುವಾಗ ನಾನು ಮತ್ತೆ ಇಲ್ಲಿ ಕೂತು ನಿಮಗೆ ಇದರ ಬಗ್ಗೆ ವಿವರಣೆ ನೀಡುವ ಅಗತ್ಯವಿಲ್ಲ ಎಂದುಕೊಳ್ಳುತ್ತೇನೆ. ಆಯ್ಕೆಗಾರರು ಈಗಾಗಲೇ ಧೋನಿ ಜತೆ ಇದರ ಬಗ್ಗೆ ಮಾತನಾಡಿದ್ದಾರೆ. ಆದರೆ ನಾನು ಈ ಮಾತುಕತೆಯಲ್ಲಿ ಭಾಗಿಯಾಗಿರಲಿಲ್ಲ. ಜನ ಇದರ ಬಗ್ಗೆ ಅನಗತ್ಯವಾಗಿ ಚರ್ಚೆ ಮಾಡುತ್ತಿದ್ದಾರೆ. ಧೋನಿ ಈಗಲೂ ತಂಡದ ಅವಿಭಾಜ್ಯ ಅಂಗ. ಈಗ ರಿಷಬ್ ಪಂತ್ ಗೆ ಹೆಚ್ಚು ಅವಕಾಶ ಸಿಕ್ಕಂತಾಗುತ್ತದೆ ಅಷ್ಟೇ’ ಎಂದು ಕೊಹ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ