ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

Krishnaveni K

ಶನಿವಾರ, 28 ಜೂನ್ 2025 (21:28 IST)
Photo Credit: X
ಬೆಂಗಳೂರು: ಆರ್ ಸಿಬಿ ತಂಡದ ಪ್ರಮುಖ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ಈ ಸಂಬಂಧ ಮಹಿಳೆ ಸಿಎಂಗೆ ದೂರು ನೀಡಿದ್ದಾಳೆ.

ಉತ್ತರ ಪ್ರದೇಶದ ಮಹಿಳೆ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾಳೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲೂ ಯಶ್ ದಯಾಳ್ ವಿರುದ್ಧ ಆರೋಪ ಮಾಡಿದ್ದು ನನಗೆ ಯಾರ ಭಯವೂ ಇಲ್ಲ ಎಂದಿದ್ದಾಳೆ.

ಅಷ್ಟೇ ಅಲ್ಲ ಯಶ್ ದಯಾಳ್ ಜೊತೆಗೆ ತಾನಿರುವ ಫೋಟೋವನ್ನೂ ಪ್ರಕಟಿಸಿದ್ದಾಳೆ. ಐದು ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು ಮದುವೆಯಾಗುವುದಾಗಿ ದಯಾಳ್ ನಂಬಿಸಿ ಈಗ ಮೋಸ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ದಯಾಳ್ ಬೇರೆ ಮಹಿಳೆಯೊಂದಿಗೂ ಅಕ್ರಮ ಸಂಬಂಧ ಹೊಂದಿದ್ದರು. ಈ ಸಂಬಂಧ ನಾನು ವಿರೋಧಿಸಿದ್ದಕ್ಕೆ ನನ್ನ ಮೇಲೂ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದಳು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ