ಐರ್ಲೆಂಡ್ ಸರಣಿಗೆ ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾ ನಾಯಕತ್ವ

ಗುರುವಾರ, 16 ಜೂನ್ 2022 (08:50 IST)
ಮುಂಬೈ: ಟೀಂ ಇಂಡಿಯಾ-ಐರ್ಲೆಂಡ್ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯಗೆ ಭಾರತ ತಂಡದ ನಾಯಕತ್ವ ನೀಡಲಾಗಿದೆ.

ಐರ್ಲೆಂಡ್ ವಿರುದ್ಧದ ಸರಣಿಗೂ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಫ್ರಿಕಾ ಸರಣಿಗೆ ನಾಯಕತ್ವ ವಹಿಸಿದ್ದ ರಿಷಬ್ ಪಂತ್ ಗೂ ಕೊಕ್ ನೀಡಲಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಭುವನೇಶ್ವರ್ ಕುಮಾರ್ ಉಪನಾಯಕರಾಗಲಿದ್ದಾರೆ. ಉಳಿದಂತೆ ತಂಡ ಇಂತಿದೆ:

ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ ವಾಡ್, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷ್ ದೀಪ್ ಸಿಂಗ್, ಉಮ್ರಾನ್ ಮಲಿಕ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ