ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯಗೆ ಬುಲಾವ್

ಬುಧವಾರ, 2 ನವೆಂಬರ್ 2016 (14:37 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ಹಾರ್ದಿಕ್ ಪಾಂಡ್ಯಗೆ ಚೊಚ್ಚಲ ಅವಕಾಶ ಲಭಿಸಿದೆ.

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಪಾಂಡ್ಯಗೆ ಟೆಸ್ಟ್ ತಂಡದಲ್ಲಿ ಆಯ್ಕೆಯಾಗಿದ್ದರೆ, ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಇಶಾಂತ್ ಶರ್ಮಾ ತಂಡಕ್ಕೆ ವಾಪಸ್ ಆಗಿದ್ದಾರೆ.

ಕೆ ಎಲ್ ರಾಹುಲ್, ಶಿಖರ್ ಧವನ್ ಮತ್ತು ಭುವನೇಶ್ವರ ಕುಮಾರ್ ಇನ್ನೂ ಚೇತರಿಸಿಕೊಂಡಿಲ್ಲದೇ ಇರುವುದರಿಂದ ಆಯ್ಕೆ ಸಮಿತಿ ಅವರನ್ನು ಪರಿಗಣಿಸಿಲ್ಲ. ಗಾಯಗೊಂಡಿರುವ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ.

ಕರ್ನಾಟಕದ ಕರಣ್ ನಾಯರ್, ಗೌತಮ್ ಗಂಭೀರ್ ಮತ್ತು ಜಯಂತ್ ಯಾದವ್ ರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಜತೆಗೆ ವಿಶ್ರಾಂತಿಯಲ್ಲಿದ್ದ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮರಳಿದ್ದು, ಅಮಿತ್ ಮಿಶ್ರಾ ಕೂಡಾ ಅವರ ಜತೆ ಸ್ಪಿನ್ ದಾಳಿ ನಡೆಸಲಿದ್ದಾರೆ.

ಭಾರತ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಗೌತಮ್ ಗಂಭೀರ್, ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ, ಕರಣ್ ನಾಯರ್, ಹಾರ್ದಿಕ್ ಪಾಂಡ್ಯ, ವೃದ್ಧಿಮಾನ್ ಸಹಾ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಮತ್ತು ಜಯಂತ್ ಯಾದವ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ