ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಗೆ ಎರಡೂ ದೇಶಗಳ ದಿಗ್ಗಜ ಕ್ರಿಕೆಟಿಗರಾದ ಸಚಿನ್, ಆಂಡರ್ಸನ್ ಹೆಸರನ್ನು ಇಡಲು ತೀರ್ಮಾನಿಸಲಾಗಿತ್ತು. ಆದರೆ ಇದರ ಬೆನ್ನಲ್ಲೇ ಸಚಿನ್ ತಮ್ಮ ಹೆಸರು ಬಳಸದೇ ಈ ಮೊದಲಿನಂತೇ ಪಟೌಡಿ ಟ್ರೋಫಿ ಎಂದು ಕರೆಯುವಂತೆ ಮನವಿ ಮಾಡಿದ್ದಾರೆ.
ಭಾರತದ ಮಾಜಿ ಕ್ರಿಕೆಟ್ ದಿಗ್ಗಜ ಪಟೌಡಿ ಹೆಸರಿನಲ್ಲಿ ಇದುವರೆಗೂ ಭಾರತ-ಇಂಗ್ಲೆಂಡ್ ಸರಣಿ ನಡೆಸಲಾಗುತ್ತಿತ್ತು. ಆದರೆ ಈಗ ಆ ದಿಗ್ಗಜರ ಹೆಸರು ಕಿತ್ತು ಹಾಕಿ ತಮ್ಮ ಹೆಸರು ಇಡುವುದು ಬೇಡ ಎಂದು ತೆಂಡುಲ್ಕರ್ ಮನವಿ ಮಾಡಿದ್ದಾರೆ. ಜೂನ 14 ರಂದು ತೆಂಡುಲ್ಕರ್-ಆಂಡರ್ಸನ್ ಟ್ರೋಫಿ ಅನಾವರಣಗೊಳಿಸಲು ತಯಾರಿ ನಡೆದಿತ್ತು. ಆದರೆ ಅಹಮದಾಬಾದ್ ನಲ್ಲಿ ವಿಮಾನ ದುರಂತವಾಗಿ ನೂರಾರು ಮಂದಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಅದ್ಧೂರಿ ಟ್ರೋಫಿ ಅನಾವರಣ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು.