ಮತ್ತೆ ಟಾಸ್ ಸೋತ ಟೀಂ ಇಂಡಿಯಾ

ಬುಧವಾರ, 13 ಡಿಸೆಂಬರ್ 2017 (11:12 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವೆ ದ್ವಿತೀಯ ಏಕದಿನ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
 

ಕಳೆದ ಪಂದ್ಯವನ್ನು ಹೀನಾಯವಾಗಿ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ. ಹೀಗಾಗಿ ಭಾರತ ಸಣ್ಣ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಕುಲದೀಪ್ ಯಾದವ್ ಸ್ಥಾನದಲ್ಲಿ ವಾಷಿಂಗ್ಟನ್ ಸುಂದರ್ ಪದಾರ್ಪಣೆ ಮಾಡುತ್ತಿದ್ದಾರೆ. ಅದು ಬಿಟ್ಟರೆ ಕಳೆದ ಪಂದ್ಯದ ತಂಡವನ್ನೇರೋಹಿತ್ ಕಣಕ್ಕಿಳಿಸುತ್ತಿದ್ದಾರೆ. ಅತ್ತ ಶ್ರೀಲಂಕಾ ಕಳೆದ ಪಂದ್ಯದಲ್ಲಿ ಆಡಿದ್ದ ತಂಡದೊಂದಿಗೇ ಆಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ