ಐಪಿಎಲ್: ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೊಟ್ಟ ಸುಳಿವು ಏನು ಗೊತ್ತಾ?!

ಭಾನುವಾರ, 8 ಏಪ್ರಿಲ್ 2018 (08:30 IST)
ಕೋಲ್ಕೊತ್ತಾ: ಐಪಿಎಲ್ ನಲ್ಲಿ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪಂದ್ಯ ನಡೆಯಲಿದ್ದು, ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಮಹತ್ವದ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಕಳೆದ ಆವೃತ್ತಿಯಲ್ಲಿ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಈ ಆವೃತ್ತಿಯಲ್ಲಿ ತಾವು ತಮ್ಮ ಮೆಚ್ಚಿನ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯುವುದಾಗಿ ಕೊಹ್ಲಿ ಹೇಳಿದ್ದಾರೆ.

ಆ ಮೂಲಕ ಇಂದಿನ ಪಂದ್ಯಕ್ಕೆ ಆರಂಭಿಕರಾಗಿ ಕ್ವಿಂಟನ್ ಡಿ ಕಾಕ್, ಬ್ರೆಂಡಮ್ ಮೆಕಲಮ್ ಅಥವಾ ಪಾರ್ಥಿವ್ ಪಟೇಲ್, ಮನ್ ದೀಪ್ ಸಿಂಗ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮೇಲ್ನೋಟಕ್ಕೆ ಇಂದು ಆರ್ ಸಿಬಿಯೇ ಗೆಲ್ಲುವ ಫೇವರಿಟ್ ತಂಡವಾಗಿ ತೋರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ