ರಾಬಿನ್ ಉತ್ತಪ್ಪಾ, ಮನೀಶ್ ಪಾಂಡೆ ಮತ್ತು ಸ್ಟುವರ್ಟ್ ಬಿನ್ನಿ ಅವರು ಅಜಿಂಕ್ಯಾ ರಹಾನೆ ನೇತೃತ್ವದ ಭಾರತ ತಂಡದಲ್ಲಿರುವ 15 ಮಂದಿ ತಂಡಕ್ಕೆ ಆಯ್ಕೆಯಾಗಿದ್ದಾರೆ ಮತ್ತು ಲೋಕೇಶ್ ರಾಹುಲ್, ಕರುಣ್ ನಾಯರ್, ಶ್ರೇಯಾಸ್ ಗೋಪಾಲ್ ಮತ್ತು ಅಭಿಮನ್ಯು ಮಿಷನ್ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ನಾವು 6 ಟ್ರೋಫಿಗಳನ್ನು ಗೆದ್ದಿದ್ದೇವೆ. ಆದರೆ ದೇಶಕ್ಕೆ ಒಬ್ಬರು ಅಥವಾ ಇಬ್ಬರು ಮಾತ್ರ ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ನಮ್ಮ ಪೈಕಿ ಅನೇಕ ಮಂದಿ ರಾಷ್ಟ್ರೀಯ ತಂಡಕ್ಕೆ ಮತ್ತು ಎ ತಂಡಕ್ಕೆ ಆಯ್ಕೆಯಾಗಿರುವುದು ಸಂತೋಷ ತಂದಿದೆ ಎಂದು ಉತ್ತಪ್ಪ ಹೇಳಿದರು. ಕರ್ನಾಟಕದ ಎಲ್ಲಾ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಮ್ಮ ಸಾಮರ್ಥ್ಯ ರುಜುವಾತು ಮಾಡುತ್ತಾರೆಂದು ಉತ್ತಪ್ಪಾ ವಿಶ್ವಾಸ ವ್ಯಕ್ತಪಡಿಸಿದರು.