ಮಂಗಳೂರು ಮಳೆಗೆ ಮಿಡಿದ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಹೃದಯ

ಗುರುವಾರ, 31 ಮೇ 2018 (09:47 IST)
ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮಹಾ ಮಳೆಗೆ ತತ್ತರಿಸಿರುವ ಮಂಗಳೂರು ಜನರಿಗೆ ಮನಮಿಡಿಯುವ ಟ್ವೀಟ್ ಮಾಡಿದ್ದಾರೆ.

ಮಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಇಡೀ ನಗರವೇ ಮುಳುಗಿ ಹೋಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ‘ಮಂಗಳೂರು ಜನರೇ ಸುರಕ್ಷಿತವಾಗಿರಿ, ನನ್ನ ಪ್ರಾರ್ಥನೆ ನಿಮಗಾಗಿ ಇದ್ದೇ ಇದೆ. ತುರ್ತು ಕರೆ ಮಾಡಬೇಕಾದ ನಂಬರ್ ಶೇರ್ ಮಾಡಿ’ ಎಂದು ಎಮರ್ಜೆನ್ಸಿ ದೂರವಾಣಿ ನಂಬರ್ ಸಮೇತ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ