ಇಶಾಂತ್ ಬಿಟ್ಟು ಉಮೇಶ್ ಗೆ ಮಣೆ ಹಾಕಿದ್ದು ಯಾಕೆ? ಕಾರಣ ಕೊಟ್ಟ ಕೊಹ್ಲಿ

ಬುಧವಾರ, 12 ಜನವರಿ 2022 (09:10 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಉಮೇಶ್ ಯಾದವ್ ಗೆ ಅವಕಾಶ ನೀಡಲಾಗಿದೆ.

ಸಿರಾಜ್ ಅನುಪಸ್ಥಿತಿಯಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾಗೆ ಅವಕಾಶ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಉಮೇಶ್ ಗೆ ಸ್ಥಾನ ನೀಡಿರುವುದರ ಬಗ್ಗೆ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

‘ಉಮೇಶ್ ಮತ್ತು ಇಶಾಂತ್ ನಡುವೆ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟವಾಗಿತ್ತು. ಆದರೆ ಉಮೇಶ್ ಇತ್ತೀಚೆಗಿನ ದಿನಗಳಲ್ಲಿ ಆಪತ್ಕಾಲದಲ್ಲಿ ನೆರವಾಗಿದ್ದಾರೆ. ಹೀಗಾಗಿ ಅವರನ್ನು ಆಡುವ ಬಳಗಕ್ಕೆ ಸೇರಿಸಲಾಯಿತು’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ