ಭಾರತ-ವೆಸ್ಟ್ ಇಂಡೀಸ್ ಕ್ರಿಕೆಟ್:ಕರ್ನಾಟಕದ ಹುಡುಗನಿಗೆ ಸಿಗದೇ ಹೋಯ್ತು ಅದೃಷ್ಟ!

ಶುಕ್ರವಾರ, 12 ಅಕ್ಟೋಬರ್ 2018 (07:00 IST)
ಹೈದರಾಬಾದ್: ಇಂದಿನಿಂದ ಇಲ್ಲಿ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ
ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕ ಮೂಲದ ಮಯಾಂಕ್ ಅಗರ್ವಾಲ್ ಗೆ ಆಡುವ ಬಳಗದಲ್ಲಿ ಅವಕಾಶ ದೊರೆಯುವ ಸಾಧ್ಯತೆಯಿದೆ ಎಂದೇ ಹೇಳಲಾಗಿತ್ತ. ಆದರೆ ಅದೆಲ್ಲಾ ಹುಸಿಯಾಗಿದೆ.


ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ಆ ಸ್ಥಾನಕ್ಕೆ ಮಯಾಂಕ್ ರನ್ನು ಆಡಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಹೇಗಿದ್ದರೂ ವಿಂಡೀಸ್ ದುರ್ಬಲ ಎದುರಾಳಿ ಎಂಬ ಕಾರಣಕ್ಕೆ ಟೀಂ ಇಂಡಿಯಾ ಅವಕಾಶ ಸಿಗದೇ ಇರುವ ಪ್ರತಿಭಾವಂತರಿಗೆ ಅವಕಾಶ ನೀಡಬಹುದಿತ್ತು. ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕರ್ನಾಟಕ ಪ್ರತಿಭಾವಂತ ಆಟಗಾರ ಮಯಾಂಕ್ ಜತೆಗೆ ಇಂಗ್ಲೆಂಡ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಹನುಮ ವಿಹಾರಿಯನ್ನೂ ಕಡೆಗಣಿಸಿದೆ.

ಆರಂಭಿಕರಾಗಿ ಕಳೆದ ಪಂದ್ಯದಲ್ಲಿ ವಿಫಲರಾದ ಕೆಎಲ್ ರಾಹುಲ್ ಗೆ ಭವಿಷ್ಯದ ದೃಷ್ಟಿಯಿಂದ ಈ ಪಂದ್ಯದಲ್ಲಿ ಉತ್ತಮ ಆರಂಭ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಆಸ್ಟ್ರೇಲಿಯಾ ಸರಣಿಗೆ ಮೊದಲು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಯುವ ಆಟಗಾರರಿಗೆ ಅವಕಾಶ ನೀಡಬಹುದು ಎಂಬ ಲೆಕ್ಕಾಚಾರಗಳು ಈ ಮೂಲಕ ಹುಸಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ