ಬೆಂಗಳೂರಿನ ಎನ್ ಸಿಎನಲ್ಲಿದೆ ಮಿನಿ ಟೀಂ ಇಂಡಿಯಾ!

ಬುಧವಾರ, 28 ಜೂನ್ 2023 (08:20 IST)
Photo Courtesy: Twitter

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಈಗ ಮಿನಿ ಟೀಂ ಇಂಡಿಯಾವಾಗಿ ಬದಲಾಗಿದೆ!

ಯಾಕೆಂದರೆ ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಪದೇ ಪದೇ ಗಾಯಗೊಳ್ಳುತ್ತಿರುವುದು ಮಾಮೂಲಾಗಿದೆ. ಗಾಯಗೊಂಡ ಆಟಗಾರರು ಮರಳಿ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡು ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲೇಬೇಕು.

ಸದ್ಯಕ್ಕೆ ಗಾಯಾಳುಗಳಾಗಿ ಚೇತರಿಸಿಕೊಳ್ಳುತ್ತಿರುವ ಆಟಗಾರರೆಂದರೆ ರಿಷಬ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್. ಇವರ ಜೊತೆಗೆ ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಕೂಡಾ ಎನ್ ಸಿಎನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಹೀಗಾಗಿ ಎನ್ ಸಿಎ ಈಗ ಮಿನಿ ಟೀಂ ಇಂಡಿಯಾವಾಗಿ ಬದಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ