ಟೀಂ ಇಂಡಿಯಾಕ್ಕೆ ಆಸ್ಟ್ರೇಲಿಯಾ ಸರಣಿ ಗೆದ್ದು ಪುಲ್ವಾಮಾ ಹುತಾತ್ಮ ಯೋಧರಿಗೆ ಅರ್ಪಿಸುವಾಸೆ

ಬುಧವಾರ, 20 ಫೆಬ್ರವರಿ 2019 (10:14 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ದಿಗ್ವಿಜಯ ಸಾಧಿಸಿ ಆ ಗೆಲುವನ್ನು ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಅರ್ಪಿಸುವ ಆಸೆಯಿದೆ ಎಂದು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಹೇಳಿಕೊಂಡಿದ್ದಾರೆ.


‘ಈ ಸರಣಿ ಗೆಲ್ಲಲು ಸಾಧ್ಯವಾದ ಎಲ್ಲಾ ಪ್ರಯತ್ನ ಮಾಡುವೆವು ಮತ್ತು ಆ ಗೆಲುವನ್ನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಅರ್ಪಿಸುವೆವು’ ಎಂದು ಶಮಿ ಹೇಳಿಕೊಂಡಿದ್ದಾರೆ.

ಶಮಿ ಸೇರಿದಂತೆ ಹಲವು ಕ್ರೀಡಾ ತಾರೆಯರು ಈಗಾಗಲೇ ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಆರ್ಥಿಕ ನೆರವು ನೀಡಿದ್ದಾರೆ. ಇದೀಗ ಗೆಲುವಿನ ಮೂಲಕ ಸೈನಿಕರಿಗೆ ಗೌರವ ಸಮರ್ಪಿಸುವ ಪಣ ತೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ