ಆಡದ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರಿಗೆ ಎಚ್ಚರಿಕೆ ನೀಡಿದ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್

ಸೋಮವಾರ, 17 ಸೆಪ್ಟಂಬರ್ 2018 (09:02 IST)
ಮುಂಬೈ: ರನ್ ಗಳಿಸದೇ ಇದ್ದರೂ, ವಿಕೆಟ್ ಕೀಳದೇ ಇದ್ದರೂ ತಂಡದಲ್ಲಿ ಮುಂದುವರಿಯಬಹುದು ಎಂಬ ಆಶಾಭಾವನೆ ಇದ್ದರೆ ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗರು ಕೈ ಬಿಡುವುದೇ ಒಳ್ಳೆಯದು.

ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಇಂತಹದ್ದೊಂದು ಎಚ್ಚರಿಕೆ ಸಂದೇಶವನ್ನು ಟೀಂ ಇಂಡಿಯಾ ಕ್ರಿಕೆಟಿಗರಿಗೆ ನೀಡಿದ್ದಾರೆ. ಒಂದು ವೇಳೆ ತಂಡದಲ್ಲಿ ತಕ್ಕ ಪ್ರದರ್ಶನ ನೀಡಲು ವಿಫಲವಾದರೆ ಹೊಸ ಮುಖವನ್ನು ಆಯ್ಕೆ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಂಸ್ ಕೆ ಪ್ರಸಾದ್ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧ ಹೀನಾಯ ಪ್ರದರ್ಶನದ ಬಳಿಕ ಕೆಲವು ಆಟಗಾರರ ಪ್ರದರ್ಶನ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದರ ಬೆನ್ನಲ್ಲೇ ಪ್ರಸಾದ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ, ಮುಂಬರುವ ವಿಶ್ವಕಪ್, ಮಹತ್ವದ ಆಸ್ಟ್ರೇಲಿಯಾ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಇನ್ನೂ ಕೆಲವು ಪ್ರಮುಖ ಆಟಗಾರರಿಗೆ ತವರಿನ ಸರಣಿಯಿಂದ ವಿಶ‍್ರಾಂತಿ ನೀಡಲು ಉದ್ದೇಶಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ