ಮುಂಬೈ: ಭಾರತ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಪಾಕಿಸ್ತಾನದ ಅಂಪಾಯರ್ ಅಲೀಂ ದಾರ್ ಕರ್ತವ್ಯ ನಿರ್ವಹಿಸುವುದಿಲ್ಲ. ಇದಕ್ಕೆಲ್ಲಾ ಕಾರಣ ಭಾರತ ಮತ್ತು ಪಾಕಿಸ್ತಾನ ನಡುವೆ ಹಳಸಿರುವ ಸಂಬಂಧ.
ಉರಿ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಸಂಪರ್ಕ ಕಡಿದುಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಅಲೀಂ ದಾರ್ ಅಂಪಾಯರ್ ಜವಾಬ್ದಾರಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಆದರೆ ಇದನ್ನು ಅಲ್ಲಗಳೆದಿರುವ ಐಸಿಸಿ ವಕ್ತಾರರು ಅಲೀಂ ನಿಜಕ್ಕೂ ಭಾರತ-ಇಂಗ್ಲೆಂಡ್ ಸರಣಿಗೆ ಅಂಪಾಯರ್ ಆಗಿ ನೇಮಕವಾಗಿರಲೇ ಇಲ್ಲ. ಅವರು ಆಸ್ಟ್ರೇಲಿಯಾದಲ್ಲಿ ಕರ್ತವ್ಯದಲ್ಲಿದ್ದಾರೆ. ಹೀಗಿರುವಾಗ ಭಾರತಕ್ಕೆ ಬರಲು ಹೇಗೆ ಸಾಧ್ಯ ಎಂದಿದ್ದಾರೆ.
ಹೀಗಾಗಿ ಭಾರತ ಸರಣಿಗೆ ಶ್ರೀಲಂಕಾದ ಕುಮಾರ್ ಧರ್ಮಸೇನಾ ಅಂಪಾಯರ್ ಆಗಲಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನವಂಬರ್ 9 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ