ಭಾರತದಲ್ಲಿ ಕ್ರಿಕೆಟ್ ಸರಣಿ ಆಡಲು ರೆಡಿ ಎಂದ ಪಾಕ್

ಶುಕ್ರವಾರ, 12 ಮೇ 2017 (07:05 IST)
ಕರಾಚಿ: ಭಾರತ ತನ್ನೊಂದಿಗೆ ಕ್ರಿಕೆಟ್ ಸರಣಿ ಆಡುತ್ತೋ ಬಿಡುತ್ತೋ. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಂತೂ ಭಾರತದ ನೆಲದಲ್ಲಿ ಆಡಲು ತಮ್ಮ ಅಭ್ಯಂತರವಿಲ್ಲ ಎಂದಿದೆ.

 
ಭಾರತದಲ್ಲಿ ಉಭಯ ದೇಶಗಳ ಕ್ರಿಕೆಟ್ ಸರಣಿ ಆಡಲು ನಮ್ಮ ತಕರಾರು ಏನಿಲ್ಲ. ಜುಲೈ-ಆಗಸ್ಟ್ ತಿಂಗಳಿನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುವುದಾಗಿ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಪಿಸಿಬಿ ಮುಖ್ಯಸ್ಥ ಶಹರ್ಯಾರ್ ಖಾನ್ ಹೇಳಿದ್ದಾರೆ.

ಬಾಂಗ್ಲಾದೇಶದಂತೆ ಭಾರತಕ್ಕೂ ತಂಡ ಕಳುಹಿಸಲು ಪಿಸಿಬಿ ರೆಡಿ ಇದೆ. ಆದರೆ ಬಿಸಿಸಿಐ ಭದ್ರತೆ ನೆಪ ಮಾಡಿಕೊಂಡು ನಮ್ಮ ದೇಶದಲ್ಲಿ ಮಾತ್ರವಲ್ಲ, ಹೊರಗಡೆಯೂ ಆಡಲು ಒಪ್ಪುತ್ತಿಲ್ಲ ಎಂದು ಅವರು ದೂರಿದ್ದಾರೆ.

ಇತ್ತೀಚೆಗಷ್ಟೇ ಪಿಸಿಬಿ ಪರಸ್ಪರ ಒಪ್ಪಂದ ಮುರಿದ ಕಾರಣಕ್ಕೆ ಬಿಸಿಸಿಐ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ. ಇದರ ಫಲವಾಗಿ ನಷ್ಟ ಪರಿಹಾರ ನೀಡುವಂತೆ ಲೀಗಲ್ ನೋಟಿಸ್ ಜಾರಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ