ಕಾವೇರಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಕಪ್ಪು ಪಟ್ಟಿ ಕಟ್ಟಿಕೊಳ್ಳಲಿ ಎಂದ ರಜನೀಕಾಂತ್

ಸೋಮವಾರ, 9 ಏಪ್ರಿಲ್ 2018 (08:57 IST)
ಚೆನ್ನೈ: ಕಾವೇರಿ ಜಲಮಂಡಳಿ ರಚನೆಗಾಗಿ ಹೋರಾಟಕ್ಕೆ ಕೈ ಜೋಡಿಸಿರುವ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಐಪಿಎಲ್ ನ ಚೆನ್ನೈ ತಂಡ ಕೂಡಾ ಹೋರಾಟದಲ್ಲಿ ಭಾಗಿಯಾಗಲಿ ಎಂದು ಒತ್ತಾಯಿಸಿದ್ದಾರೆ.

ಕಾವೇರಿ ನದಿ ನೀರಿಗಾಗಿ ನಡೆಸುತ್ತಿರುವ ಹೋರಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೂಡಾ ಧ್ವನಿಗೂಡಿಸಲಿ. ಆಡುವಾಗ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಲಿ ಎಂದು ರಜನಿ ಸಲಹೆ ನೀಡಿದ್ದಾರೆ.

ರಾಜ್ಯ ಕಾವೇರಿ ನದಿಗಾಗಿ ಹೋರಾಡುತ್ತಿರಬೇಕಾದರೆ ಈ ರಾಜ್ಯವನ್ನು ಪ್ರತಿನಿಧಿಸುವ ತಂಡವನ್ನು ಮೌನವಾಗಿರಲು ಹೇಗೆ ಸಾಧ್ಯ ಎಂದು ರಜನಿ ಪ್ರಶ್ನಿಸಿದ್ದಾರೆ. ನಿನ್ನೆ ರಜನಿ ಮತ್ತು ತಮಿಳು ಚಿತ್ರರಂಗದ ಸ್ಟಾರ್ ನಟರು ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ