ರಣಜಿ ಟ್ರೋಫಿ ಕ್ರಿಕೆಟ್: ಮೊದಲ ಗೆಲುವಿನ ಸನಿಹ ಕರ್ನಾಟಕ

ಶುಕ್ರವಾರ, 30 ನವೆಂಬರ್ 2018 (17:20 IST)
ಮೈಸೂರು: ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಈ ಋತುವಿನಲ್ಲಿ ಮೊದಲ ಗೆಲುವು ದಾಖಲಿಸಲು ಕರ್ನಾಟಕ ಕೆಲವೇ ಹೆಜ್ಜೆ ದೂರದಲ್ಲಿದೆ. ಮಹಾರಾಷ್ಟ್ರ ವಿರುದ್ಧ ಗೆಲುವಿಗೆ ಇನ್ನು 130 ರನ್ ಗಳಿಸಿದರೆ ಸಾಕು.


ಮೈಸೂರಿನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಇಂದು ದಿನದಂತ್ಯಕ್ಕೆ ಮಹಾರಾಷ್ಟ್ರ ನೀಡಿದ 184 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಕರ್ನಾಟಕ ವಿಕೆಟ್ ನಷ್ಟವಿಲ್ಲದೇ 54 ರನ್ ಗಳಿಸಿದೆ. ಕರ್ನಾಟಕ ಪರ ದೇಗಾ ನಿಶ್ಚಲ್ 21 ಮತ್ತು ದೇವದತ್ ಪಡಿಕ್ಕಲ್ 33 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ನಾಳೆ ಒಂದು ದಿನದ ಪಂದ್ಯ ಬಾಕಿಯಿದ್ದು, ಕರ್ನಾಟಕದ ಗೆಲುವು ಬಹುತೇಕ ನಿಶ್ಚಿತವಾಗಿದೆ. ಇದಕ್ಕೂ ಮೊದಲು ಮಹಾರಾಷ್ಟ್ರ ದ್ವಿತೀಯ ಇನಿಂಗ್ಸ್ ನಲ್ಲಿ ಋತುರಾಜ್ ಗಾಯಕ್ ವಾಡ್ ರ 89 ರನ್ ಗಳ ನೆರವಿನಿಂದ 256 ರನ್ ಗಳಿಸಿತ್ತು. ಕರ್ನಾಟಕ ಪರ ಶ್ರೇಯಸ್ ಗೋಪಾಲ್ 4 ವಿಕೆಟ್ ಮತ್ತು ನಾಯಕ ವಿನಯ್ ಕುಮಾರ್ 3 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ