RCB: ಅಹಮ್ಮದಾಬಾದ್ ನಿಂದ ವಿಮಾನವೇರಿದ ಆರ್ ಸಿಬಿ ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ
ಇಂದು ಇಡೀ ಆರ್ ಸಿಬಿ ತಂಡ ಅಹಮ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಮೆಂಟರ್ ದಿನೇಶ್ ಕಾರ್ತಿಕ್ ಬೆಂಗಳೂರು ರೆಡಿಯಾಗಿ ಎಂದಿದ್ದಾರೆ.
ಇಡೀ ಬೆಂಗಳೂರೇ ಈಗ ಆರ್ ಸಿಬಿಯನ್ನು ಸ್ವಾಗತಿಸಲು ಕಾಯುತ್ತಿದೆ. ವಿಮಾನ ನಿಲ್ದಾಣದ ಸುತ್ತ ಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. ಆಟಗಾರರು ನೇರವಾಗಿ ವಿಧಾನಸೌಧಕ್ಕೆ ತೆರಳಲಿದ್ದಾರೆ. ಅಲ್ಲಿ ಸಿಎಂ ಸಿದ್ದರಾಮಯ್ಯ ಆಟಗಾರರನ್ನು ಸನ್ಮಾನಿಸಲಿದ್ದಾರೆ.
ಇದಾದ ಬಳಿಕ ಆಟಗಾರರು ಬಿಗಿ ಭದ್ರತೆಯಲ್ಲಿ ನೇರವಾಗಿ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿರುತ್ತಾರೆ. ಅಭಿಮಾನಿಗಳ ಸಮ್ಮುಖದಲ್ಲಿ ಟ್ರೋಫಿ ಹಿಡಿದು ಆಟಗಾರರು ಧನ್ಯವಾದ ಸಲ್ಲಿಸಲಿದ್ದಾರೆ.