ಈ ಬಾರಿ ವಿಶ್ವಕಪ್ ಗೆಲ್ಲುವ ಭರವಸೆಯಿದೆ: ರೋಹಿತ್ ಶರ್ಮಾ

ಮಂಗಳವಾರ, 8 ಆಗಸ್ಟ್ 2023 (09:38 IST)
ಮುಂಬೈ: ಈ ಬಾರಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಭರವಸೆಯಿದೆ. ಅದಕ್ಕಾಗಿ ಎದಿರು ನೋಡುತ್ತಿದ್ದೇನೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

2011 ರಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಆ ವಿಶ್ವಕಪ್ ನನ್ನು ಭಾರತ ಧೋನಿ ನೇತೃತ್ವದಲ್ಲಿ ಆಡಿ ಚಾಂಪಿಯನ್ ಪಟ್ಟಕ್ಕೇರಿತ್ತು. ಅದಾದ ಬಳಿಕ ಮತ್ತೆ ಭಾರತದಲ್ಲಿ ವಿಶ್ವಕಪ್ ನಡೆಯುತ್ತಿದೆ.

‘2011 ರ ವಿಶ್ವಕಪ್ ನಲ್ಲಿ ನಾನು ತಂಡದ ಭಾಗವಾಗಿರಲಿಲ್ಲ. ಮನೆಯಲ್ಲಿ ಕೂತು ಪಂದ್ಯ ನೋಡುತ್ತಿದ್ದೆ. ಆದರೆ ಆ ವಿಶ್ವಕಪ್ ನ ಸಾಕಷ್ಟು ಸುಂದರ ನೆನಪುಗಳಿವೆ. ಭಾರತದಲ್ಲಿ ನಡೆಯುವಾಗ ನಮ್ಮ ಜನರ ಬೆಂಬಲ ಅಭೂತಪೂರ್ವವಾಗಿರುತ್ತದೆ. ಈ ಬಾರಿ ಮತ್ತೆ ನಮಗೆ ಕಪ್ ಗೆಲ್ಲಲು ಸಾಧ್ಯವಾಗುತ್ತದೆ ಎಂದುಕೊಂಡಿದ್ದೇನೆ. ಅದಕ್ಕಾಗಿ ಎದಿರು ನೋಡುತ್ತಿದ್ದೇನೆ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ