ಈ ಅರ್ಜಿಯನ್ನು 2013ರ ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಚಾಲನೆ ನೀಡಿದ ಬಿಹಾರ ಕ್ರಿಕೆಟ್ ಸಂಸ್ಥೆ ಸಲ್ಲಿಸಿದ್ದು, ಮ್ಯಾಚ್ ಫಿಕ್ಸಿಂಗ್ ಹಗರಣದಿಂದ ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಅಮಾನತಿಗೆ ದಾರಿ ಕಲ್ಪಿಸಿತ್ತು.
ಬಿಹಾರ ಸಲ್ಲಿಸಿದ ಅರ್ಜಿಯಲ್ಲಿ ಲೋಧಾ ಸಮಿತಿಯ ವರದಿ ಪ್ರಕಾರ, ಆರೋಪ ಪಟ್ಟಿಯಲ್ಲಿ ಹೆಸರಿಸಲಾದ ವ್ಯಕ್ತಿಗಳು ಬಿಸಿಸಿಐ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಬಿಸಿಸಿಐ ಚುನಾವಣೆಗೆ ತಡೆ ನೀಡಬೇಕು ಅಥವಾ ಠಾಕುರ್ ಸ್ಪರ್ಧೆಯನ್ನು ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.