ಯುದ್ಧ ಮಾಡೋಣ ಎಂದ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಶಾಹಿದ್ ಅಫ್ರಿದಿ ಪ್ರತಿಕ್ರಿಯೆ ಏನು ಗೊತ್ತಾ?

ಸೋಮವಾರ, 18 ಫೆಬ್ರವರಿ 2019 (09:14 IST)
ನವದೆಹಲಿ: ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ಬಳಿಕ ಆಕ್ರೋಶಭರಿತರಾಗಿ ಟ್ವೀಟ್ ಮಾಡಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ.


‘ಹೌದು ನಾವು ಪ್ರತ್ಯೇಕತಾವಾದಿಗಳೊಂದಿಗೆ, ಪಾಕ್ ನೊಂದಿಗೆ ಮಾತನಾಡಬೇಕಿದೆ. ಆದರೆ ಮಾತುಕತೆ ಟೇಬಲ್ ಮುಂದೆ ಅಲ್ಲ, ಯುದ್ಧ ಭೂಮಿಯಲ್ಲಿ ನಡೆಯಬೇಕು’ ಎಂದು ಗಂಭೀರ್ ಆಕ್ರೋಶ ಭರಿತರಾಗಿ ಟ್ವೀಟ್ ಮಾಡಿದ್ದರು.

ಗಂಭೀರ್ ಟ್ವೀಟ್ ಬಗ್ಗೆ ಶಾಹಿದ್ ಅಫ್ರಿದಿ ಬಳಿ ಪತ್ರಕರ್ತರು ಪ್ರತಿಕ್ರಿಯೆ ಕೇಳಿದಾಗ ‘ಅವನಿಗೆ ಏನಾಗಿದೆ?’ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಹಿಂದೆ ಹಲವು ಬಾರಿ ಕಾಶ್ಮೀರ ವಿಚಾರದಲ್ಲಿ ಅಫ್ರಿದಿ ವಿವಾದಾತ್ಮಕ ಟ್ವೀಟ್ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಷ್ಟೇ ಅಲ್ಲ, ಭಾರತ-ಪಾಕ್ ಕ್ರಿಕೆಟ್ ಪಂದ್ಯದ ವೇಳೆ ಹಿಂದೆ ಈ ಇಬ್ಬರೂ ಕ್ರಿಕೆಟಿಗರು ಮೈದಾನದಲ್ಲಿ ವಾಗ್ವಾದ ನಡೆಸಿದ್ದರು. ಇದೀಗ ಹೇಳಿಕೆಗೆ ಏಟು-ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ