ಬಿಸಿಸಿಐ ವಿರುದ್ಧ ಸಿಡಿದೆದ್ದರಾ ಶ್ರೇಯಸ್ ಅಯ್ಯರ್: ಮಾಡಿದ್ದೇನು
ಆದರೆ ಇದೀಗ ಅವರನ್ನು ಆಸ್ಟ್ರೇಲಿಯಾ ಎ ತಂಡದ ವಿರುದ್ಧ ನಡೆಯಬೇಕಿದ್ದ ಅನಧಿಕೃತ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ನಾಯಕರಾಗಿದ್ದರು. ಯಾವಾಗ ಟೆಸ್ಟ್ ಸರಣಿಗೆ ತಮ್ಮನ್ನು ಪರಿಗಣಿಸುತ್ತಿಲ್ಲ ಎಂದು ಗೊತ್ತಾಯಿತೋ ಆಗಲೇ ಶ್ರೇಯಸ್ ಅಯ್ಯರ್ ಅಸಮಾಧಾನದಿಂದಲೇ ಎ ತಂಡದ ನಾಯಕತ್ವದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ. ಇದೀಗ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಧ್ರುವ ಜ್ಯುರೆಲ್ ತಂಡದ ನಾಯಕರಾಗಲಿದ್ದಾರೆ.
ಟೆಸ್ಟ್ ತಂಡಕ್ಕೆ ತಮ್ಮನ್ನು ಪರಿಗಣಿಸದಿದ್ದ ಮೇಲೆ ಎ ತಂಡದ ಪರ ಟೆಸ್ಟ್ ಪಂದ್ಯವಾಡುವುದರ ಔಚಿತ್ಯವೇನು ಎಂದೇ ಶ್ರೇಯಸ್ ಅಯ್ಯರ್ ಈ ರೀತಿ ಮಾಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಅಧಿಕೃತವಾಗಿ ಶ್ರೇಯಸ್ ಅಯ್ಯರ್ ಹಿಂದೆ ಸರಿದಿರುವುದಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ.