ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಪಾಕ್ ಗೆ ನೆರವಾಗಿದ್ದ ರವಿಶಾಸ್ತ್ರಿ, ಸುನಿಲ್ ಗವಾಸ್ಕರ್

ಶನಿವಾರ, 14 ಅಕ್ಟೋಬರ್ 2017 (08:10 IST)
ನವದೆಹಲಿ: ಇತ್ತೀಚೆಗೆ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಫೈನಲ್ ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. ಇದಕ್ಕೆ ಕಾರಣ ಹಾಲಿ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಮತ್ತು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ರಂತೆ!

 
ಹಾಗಂತ ಅಂದು ಪಾಕ್ ತಂಡದ ಮ್ಯಾನೇಜರ್ ಆಗಿದ್ದ ಮಾಜಿ ಕ್ರಿಕೆಟಿಗ ತಲತ್ ಅಲಿ ಹೇಳಿಕೊಂಡಿದ್ದಾರೆ. ಪಾಕಿಸ್ತಾನವನ್ನು ಫೈನಲ್ ನಲ್ಲಿ ಗೆಲ್ಲಿಸಿದ್ದು ರವಿಶಾಸ್ತ್ರಿ ಮತ್ತು ಸುನಿಲ್ ಗವಾಸ್ಕರ್ ಎಂದು ಅವರು ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಇವರಿಬ್ಬರೂ ವೀಕ್ಷಕ ವಿವರಣೆ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ರವಿಶಾಸ್ತ್ರಿ ಮತ್ತು ಗವಾಸ್ಕರ್ ಪಾಕಿಸ್ತಾನಕ್ಕೆ ಚಾಂಪಿಯನ್ ಆಗುವ ಯಾವುದೇ ಅವಕಾಶವಿಲ್ಲ ಎಂಬಂತೆ ಉಡಾಫೆಯಿಂದ ಮಾತನಾಡುತ್ತಿದ್ದರು.

ಇದನ್ನು ಕೇಳಿ ಪಾಕ್ ಆಟಗಾರರಿಗೆ ಉರಿದುಹೋಯ್ತಂತೆ. ಆದರೆ ಈ ಬಗ್ಗೆ ಪತ್ರಿಕಾ ಹೇಳಿಕೆ ಕೊಡುವುದರ ಬದಲು ಬ್ಯಾಟ್ ಮತ್ತು ಬೌಲ್ ನಿಂದಲೇ ಮಾತನಾಡೋಣ ಎಂದು ತೀರ್ಮಾನಿಸಿದೆವು. ಅದರಂತೆ ಆಡಿ ಗೆದ್ದೆವು ಎಂದು ತಲತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ