ಬುಮ್ರಾ ಇಲ್ಲದಿರುವುದೇ ಟೀಂ ಇಂಡಿಯಾಕ್ಕೆ ದೊಡ್ಡ ಪ್ರಾಬ್ಲಂ ಎಂದ ಸುನಿಲ್ ಗವಾಸ್ಕರ್

ಬುಧವಾರ, 4 ಜುಲೈ 2018 (09:35 IST)
ನವದೆಹಲಿ: ಇಂಗ್ಲೆಂಡ್ ವಿರುದ್ಧ ಮಹತ್ವದ ಸರಣಿಗೆ ಮೊದಲು ಟೀಂ ಇಂಡಿಯಾ ಸೀಮಿತ ಓವರ್ ಗಳ ಸ್ಪೆಷಲಿಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಸೇವೆಯಿಂದ ವಂಚಿತವಾಗಿದೆ.
 

ಇದು ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಲಿದೆ ಎಂದು ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಬುಮ್ರಾ ಡೆತ್ ಓವರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದವರು.

ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅಂತಿಮ ಓವರ್ ಗಳಲ್ಲಿ ಚೆನ್ನಾಗಿ ಬೌಲ್ ಮಾಡುತ್ತಾರೆ. ಆದರೆ ಇದೀಗ ಬುಮ್ರಾರನ್ನು ಕಳೆದುಕೊಂಡಿರುವುದರಿಂದ ಆ ಜವಾಬ್ಧಾರಿ ಉಮೇಶ್ ಯಾದವ್ ಹೆಗಲಿಗೇರಲಿದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ