ಬಿಸಿಸಿಐ ಸಭೆ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸನ್‌ಗೆ ಸುಪ್ರೀಂಕೋರ್ಟ್ ತರಾಟೆ

ಸೋಮವಾರ, 23 ಫೆಬ್ರವರಿ 2015 (16:26 IST)
ಸುಪ್ರೀಂಕೋರ್ಟ್ ಸೋಮವಾರ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರನ್ನು ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಬಗ್ಗೆ ತರಾಟೆಗೆ ತೆಗೆದುಕೊಂಡಿದೆ. ಫೆ. 8ರಂದು ಬಿಸಿಸಿಐ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿತು.

ತನ್ನ ಆದೇಶಕ್ಕೆ ವಿರುದ್ಧವಾಗಿ ಬಿಸಿಸಿಐ ಸಭೆಯ ಅಧ್ಯಕ್ಷತೆ ವಹಿಸಿದ್ದಕ್ಕೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಶ್ರೀನಿವಾಸನ್ ಹೀಗೆ ಮಾಡಬಾರದಿತ್ತು ಎಂದು ತಿಳಿಸಿದೆ. ಈ ಪ್ರಕರಣ ಸಂಬಂಧ ಫೆ. 27ರೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ.

ಮಾರ್ಚ್‌ನಲ್ಲಿ ವಾರ್ಷಿಕ ಸಾಮಾನ್ಯ ಸಭೆ ನಡೆಸುವ ಬಗ್ಗೆ ನಿರ್ಧರಿಸಲು ಬಿಸಿಸಿಐ ಕಾರ್ಯಕಾರಿ ಸಮಿತಿಯ ಸಭೆಯನ್ನು ಶ್ರೀನಿವಾಸನ್ ಮತ್ತಿತರ ಅಧಿಕಾರಿಗಳು ಆಯೋಜಿಸಿದ್ದರು. ಈ ಕುರಿತು ನಿಂದನಾ ಪ್ರಕರಣ ದಾಖಲಿಸುವಂತೆ ಕೋರಿ ಬಿಹಾರ ಕ್ರಿಕೆಟ್ ಸಂಸ್ಥೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ವೆಬ್ದುನಿಯಾವನ್ನು ಓದಿ