ವಿಂಡೀಸ್ ವಿರುದ್ಧ ಔಪಚಾರಿಕ ಪಂದ್ಯಕ್ಕೆ ವೇಗಿಗಳ ಪಡೆಗೆ ರೆಸ್ಟ್ ನೀಡಿದ ಟೀಂ ಇಂಡಿಯಾ

ಶನಿವಾರ, 10 ನವೆಂಬರ್ 2018 (08:41 IST)
ಚೆನ್ನೈ: ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಹಾಗೂ ಔಪಚಾರಿಕ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ತನ್ನ ಪ್ರಮುಖ ವೇಗಿಗಳಿಗೆ ವಿಶ್ರಾಂತಿ ನೀಡಿದೆ.

ಮುಂಬರುವ ಆಸ್ಟ್ರೇಲಿಯಾ ಸರಣಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಲದೀಪ್ ಯಾದವ್, ಉಮೇಶ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲು ಟೀಂ ಇಂಡಿಯಾ ಚಿಂತಕರ ಚಾವಡಿ ನಿರ್ಧರಿಸಿದೆ.

ಆದರೆ ಭುವನೇಶ್ವರ್ ಕುಮಾರ್ ನನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಬಿಸಿಸಿಐ ಘೋಷಿಸಿರುವ 12 ಮಂದಿ ಆಟಗಾರರ ತಂಡದಲ್ಲಿ ಹೊಸದಾಗಿ ಶ್ರಾದ್ಧೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ