ಅರುಣ್ ಜೇಟ್ಲಿ ಗೌರವಾರ್ಥ ಕಪ್ಪು ಪಟ್ಟಿ ಧರಿಸಿ ಆಡಿದ ಟೀಂ ಇಂಡಿಯಾ

ಭಾನುವಾರ, 25 ಆಗಸ್ಟ್ 2019 (09:18 IST)
ಆಂಟಿಗುವಾ: ಕೇಂದ್ರದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಸಂತಾಪ ಸೂಚಿಸಿ ಟೀಂ ಇಂಡಿಯಾ ಕ್ರಿಕೆಟಿಗರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.


ಜೇಟ್ಲಿ ದೆಹಲಿ ಕ್ರಿಕೆಟ್ ಸಂಸ್ಥೆ ಮತ್ತು ಬಿಸಿಸಿಐ ಉಪಾಧ್ಯಕ್ಷರೂ ಆಗಿ ಕೆಲವು ವರ್ಷ ಕಾರ್ಯ ನಿರ್ವಹಿದ್ದರು. ಕ್ರಿಕೆಟ್ ಜತೆಗೆ ನಂಟು ಹೊಂದಿರುವ ಕಾರಣಕ್ಕೆ ಅವರ ಗೌರವಾರ್ಥ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.

ಅವರ ನಿಧನಕ್ಕೆ ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಈ ಬಗ್ಗೆ ವಿಶೇಷ ಹೇಳಿಕೆ ನೀಡಿರುವ ಬಿಸಿಸಿಐ ಹಲವು ಕ್ರಿಕೆಟಿಗರ ಸಹಾಯಕ್ಕೆ ಜೇಟ್ಲಿ ಧಾವಿಸಿದ್ದರು. ಬಿಸಿಸಿಐ ಸೇರಿದಂತೆ ಭಾರತೀಯ ಕ್ರಿಕೆಟ್ ಗೆ ವಿಶೇಷ ಸೇವೆ ಸಲ್ಲಿಸಿದ್ದರು. ಹೀಗಾಗಿ ಅವರ ಗೌರವಾರ್ಥ ಕಪ್ಪು ಪಟ್ಟಿ ಧರಿಸಿ ಆಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ