ಬೆಂಗಳೂರಿಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗರು

ಮಂಗಳವಾರ, 7 ನವೆಂಬರ್ 2023 (08:40 IST)
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆಡಲಿದೆ.

ನವಂಬರ್ 12 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಟೀಂ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕಾಗಿ ನಿನ್ನೆ ಸಂಜೆ ರೋಹಿತ್ ಪಡೆ ಬೆಂಗಳೂರಿಗೆ ಬಂದಿಳಿದಿದೆ.

ವಿರಾಟ್ ಕೊಹ್ಲಿ ಎಲ್ಲರಿಗಿಂತ ಮೊದಲೇ ಬೆಂಗಳೂರಿಗೆ ಬಂದಿಳಿದಿದ್ದರು. ಸಂಜೆ ವೇಳೆಗೆ ರೋಹಿತ್ ಶರ್ಮಾ ನೇತೃತ್ವದ ತಂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಂದಿನ ಪಂದ್ಯಕ್ಕೆ ಮೊದಲು ರಿಲ್ಯಾಕ್ಸ್ ಆಗಲು ರೋಹಿತ್ ಪಡೆಗೆ ಕೊಂಚ ಬ್ರೇಕ್ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ