ಭಾರತ-ಶ್ರೀಲಂಕಾ ಅಂತಿಮ ಟಿ20 ಇಂದು: ಟೀಂ ಇಂಡಿಯಾದಲ್ಲಿ ಬದಲಾವಣೆ

ಭಾನುವಾರ, 27 ಫೆಬ್ರವರಿ 2022 (09:50 IST)
ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದೇ ಧರ್ಮಶಾಲಾದಲ್ಲಿ ನಡೆಯಲಿದೆ.

ನಿನ್ನೆಯಷ್ಟೇ ದ್ವಿತೀಯ ಟಿ20 ಪಂದ್ಯ ನಡೆದಿತ್ತು. ಈ ಪಂದ್ಯವನ್ನು ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಇಂದಿನ ಪಂದ್ಯ ಭಾರತದ ಪಾಲಿಗೆ ಔಪಚಾರಿಕವಷ್ಟೇ.

ಹೀಗಾಗಿ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಈ ಬಗ್ಗೆ ನಿನ್ನೆಯೇ ನಾಯಕ ರೋಹಿತ್ ಶರ್ಮಾ ಸೂಚನೆ ನೀಡಿದ್ದಾರೆ. ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗಲಿದೆ ಎಂದಿದ್ದಾರೆ. ಒಂದು ವೇಳೆ ಈ ಪಂದ್ಯವನ್ನೂ ಟೀಂ ಇಂಡಿಯಾ ಗೆದ್ದುಕೊಂಡರೆ ಸತತ ಎರಡನೇ ಬಾರಿಗೆ ರೋಹಿತ್ ಪಡೆ ಕ್ಲೀನ್ ಸ್ವೀಪ್ ಗರಿಮೆ ಮುಡಿಗೇರಿಸಿಕೊಳ್ಳಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ