ಭಾರತ-ಆಸೀಸ್ ಏಕದಿನ: ಚಿನ್ನಸ್ವಾಮಿ ಮತ್ತೆ ಟೀಂ ಇಂಡಿಯಾಕ್ಕೆ ಲಕ್ಕಿ ಗ್ರೌಂಡ್

ಸೋಮವಾರ, 20 ಜನವರಿ 2020 (07:22 IST)
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ. ಆ ಮೂಲಕ ಮತ್ತೆ ಚಿನ್ನಸ್ವಾಮಿ ಅಂಗಣ ಅದೃಷ್ಟದ ತಾಣ ಎಂದು ಸಾಬೀತು ಮಾಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಶತಕದ (131) ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರನ್ ಚೇಸ್ ಮಾಡಿದ ಟೀಂ ಇಂಡಿಯಾ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ಆರಂಭಿಕರ ರೋಹಿತ್ ಶರ್ಮಾ ಶತಕ (119) ಗಳಿಸಿದರೆ ನಾಯಕ ವಿರಾಟ್ ಕೊಹ್ಲಿ ಕೊನೆಯ ಓವರ್ ನಲ್ಲಿ 89 ರನ್ ಗೆ ಔಟಾದರು. ಶ್ರೇಯಸ್ ಅಯ್ಯರ್ ಬಿರುಸಿನ 44 ರನ್ ಗಳಿಸಿದರು. ಕೆಎಲ್ ರಾಹುಲ್ 19 ರನ್ ಗಳಿಗೆ ವಿಕೆಟ್ ಒಪ್ಪಿಸಿದದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ