ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್, ರಿಷಬ್ ಪಂತ್ ಏಕಿರಲಿಲ್ಲ?!

ಭಾನುವಾರ, 3 ಮಾರ್ಚ್ 2019 (09:34 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಿ20 ಪಂದ್ಯದಲ್ಲಿ ಅಭೂತಪೂರ್ವ ನಿರ್ವಹಣೆ ತೋರಿದ್ದ ಕೆಎಲ್ ರಾಹುಲ್ ರನ್ನು ಹೊರಗಿಟ್ಟಿದ್ದು, ಟ್ವಿಟರ್ ನಲ್ಲಿ ಚರ್ಚೆಗೆ ಕಾರಣವಾಯಿತು.


ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ್ದ ಕೆಎಲ್ ರಾಹುಲ್ ರನ್ನು ಹೊರಗಿಟ್ಟು, ಅಂಬಟಿ ರಾಯುಡುಗೆ ಸ್ಥಾನ ನೀಡಿದ್ದಕ್ಕೆ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತಮ ಆಟಗಾರರನ್ನು ಹೊರಗಿಟ್ಟು, ಅರ್ಹರಲ್ಲದವರಿಗೆ ಸ್ಥಾನ ಕೊಡುತ್ತಿದ್ದರೆ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವುದು ಕನಸು ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಹೊಡೆಬಡಿಯ ಆಟಗಾರ ರಿಷಬ್ ಪಂತ್ ರನ್ನು ಹೊರಗಿಟ್ಟಿರುವುದನ್ನೂ ಟ್ವಿಟರಿಗರು ಪ್ರಶ್ನಿಸಿದ್ದಾರೆ. ಪಂತ್ ಗೆ ಇನ್ನೂ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ