‘ದಾದ’ ಗಂಗೂಲಿ ಚೇತರಿಕೆಗೆ ಹಾರೈಸಿದ ವಿರಾಟ್ ಕೊಹ್ಲಿ, ಕ್ರಿಕೆಟಿಗರು

ಶನಿವಾರ, 2 ಜನವರಿ 2021 (16:33 IST)
ಕೋಲ್ಕೊತ್ತಾ: ಹೃದಯ ಸಂಬಂಧೀ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಶೀಘ‍್ರವಾಗಿ ಚೇತರಿಸಿಕೊಳ್ಳಲಿ ಎಂದು ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕ್ರಿಕೆಟಿಗರು ಹಾರೈಸಿದ್ದಾರೆ.


ಗಂಗೂಲಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಬಂದ ತಕ್ಷಣವೇ ಕೊಹ್ಲಿ, ವೀರೇಂದ್ರ ಸೆಹ್ವಾಗ್, ಅಜಿಂಕ್ಯಾ ರೆಹಾನೆ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕೃಣಾಲ್ ಪಾಂಡ್ಯ, ಮೊಹಮ್ಮದ್ ಕೈಫ್ ಸೇರಿದಂತೆ ಹಲವು ಕ್ರಿಕೆಟಿಗರು ಟ್ವಿಟರ್ ಮೂಲಕ ಬೇಗನೇ ಚೇತರಿಸಿಕೊಳ್ಳಿ ದಾದ ಎಂದು ಹಾರೈಸಿದ್ದಾರೆ. ಇವರಲ್ಲದೆ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನ್ಕಾರ್, ಬಿಸಿಸಿಐ ಕೂಡಾ ಟ್ವಿಟರ್ ಮೂಲಕ ಚೇತರಿಕೆಗೆ ಹಾರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ