ಗೆಳೆಯನಾದರೇನಾಯ್ತು? ಶಾಹಿದಿ ಅಫ್ರಿದಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ವಿರಾಟ್ ಕೊಹ್ಲಿ

ಗುರುವಾರ, 5 ಏಪ್ರಿಲ್ 2018 (09:07 IST)
ನವದೆಹಲಿ: ಭಾರತದ ಸ್ವಾಧೀನದಲ್ಲಿರುವ ಕಾಶ್ಮೀರದಲ್ಲಿ ರಕ್ತಪಾತ ಹೆಚ್ಚುತ್ತಿದೆ ಎಂದು ಕಳವಳಕಾರಿ ಟ್ವೀಟ್ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ.

ಶಾಹಿದ್ ಅಫ್ರಿದಿ ಜತೆಗೆ ಉತ್ತಮ ಬಾಂಧವ್ಯವಿಟ್ಟುಕೊಂಡಿದ್ದರೂ ದೇಶದ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ ಎಂದು ಕೊಹ್ಲಿ ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ. ಟ್ವಿಟರ್ ನಲ್ಲಿ ಅಫ್ರಿದಿ ವಿವಾದಾತ್ಮಕ ಟ್ವೀಟ್ ಗೆ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿ ಕಾರಿದ ಬೆನ್ನಲ್ಲೇ ಕೊಹ್ಲಿ ಕೂಡಾ ತಿರುಗೇಟು ನೀಡಿದ್ದಾರೆ.

ಯಾವುದೇ ಕಾರಣಕ್ಕೂ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು ಯಾವತ್ತಿದ್ದರೂ ದೇಶದ ಪರ. ಪ್ರತಿಕ್ರಿಯೆ ನೀಡುವುದು ನಮ್ಮ ವೈಯಕ್ತಿಕ ಆಯ್ಕೆಯಾಗಿರಬಹುದು. ಆದರೆ ತಲೆ ಬುಡವಿಲ್ಲದೆ ಮಾತನಾಡಬಾರದು ಎಂದು ಅಫ್ರಿದಿಗೆ ಕೊಹ್ಲಿ ತಮ್ಮ ಬ್ಯಾಟಿಂಗ್ ನಷ್ಟೇ ಹರಿತವಾಗಿ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ