ಪುಲ್ವಾಮಾ ಹುತಾತ್ಮ ಯೋಧರ ಮಕ್ಕಳ ವಿದ್ಯಾಭ್ಯಾಸಕ್ಕೆ ವೀರೇಂದ್ರ ಸೆಹ್ವಾಗ್ ನೆರವು

ಭಾನುವಾರ, 17 ಫೆಬ್ರವರಿ 2019 (10:34 IST)
ನವದೆಹಲಿ: ಪುಲ್ವಾಮಾದಲ್ಲಿ ಜೈಶೆ ಉಗ್ರರ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ಭಾರತೀಯ ಯೋಧರ ಮಕ್ಕಳ ವಿದ್ಯಾಭ್ಯಾಸಕ್ಕೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ನೆರವಾಗಲು ಮುಂದೆ ಬಂದಿದ್ದಾರೆ.


ಪುಲ್ವಾಮಾ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ಯೋಧರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಸೆಹ್ವಾಗ್ ಇದೀಗ ಮಾನವೀಯತೆ ತೋರಿದ್ದಾರೆ.

‘ಈ ಸಾಹಸಿ ಯೋಧರಿಗೆ ನಾವು ನೇರವಾಗಿ ಸಹಾಯ ಮಾಡಲಾಗದು. ಆದರೆ ಅವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಹೊಣೆ ಹೊರುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಸೆಹ್ವಾಗ್ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಸೆಹ್ವಾಗ್ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ