ಟ್ವೆಂಟಿ-20 ಕ್ರಿಕೆಟ್‌ಗೆ ಮುರಳಿ ಇಲ್ಲ

ಗುರುವಾರ, 30 ಆಗಸ್ಟ್ 2007 (19:13 IST)
ಶ್ರೀಲಂಕಾ ಕ್ರಿಕೆಟ್ ತಂಡದ ಸ್ಫಿನ್ನರ್ ಮುತ್ತಯ್ಯ ಮುರಳಿಧರನ್ ಅವರು ತಮ್ಮ ಮೊಣಕೈಗೆ ಗಾಯ ಮಾಡಿಕೊಂಡಿರುವುದರಿಂದ ಮುಂದಿನ ತಿಂಗಳಿನಿಂದ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಶ್ರೀಲಂಕಾ ಪರ ಆಡುವುದು ಅನುಮಾನ ಎಂದು ವರದಿಯಾಗಿದೆ.

ಮುತ್ತಯ್ಯ ಮುರಳಿಧರನ್ ಸ್ಥಾನಕ್ಕೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಇನ್ನೂ ಬದಲಿ ಆಟಗಾರರನನ್ನು ಆಯ್ಕೆ ಮಾಡಿಲ್ಲ. ಆದರೆ ಆಫ್ ಸ್ಪಿನ್ನರ್ ದಿಲ್ರುವನ್ ಪೆರೆರಾ ಅವರ ಆಯ್ಕೆಯಾಗುವ ಸಾಧ್ಯತೆ ಇದೆ.

ಮುರಳಿ ಮೊಣಕಾಲಿಗೆ ಗಾಯವಾಗಿದ್ದು ಅವರು ಕನಿಷ್ಟ ಆರು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಕಂಗಾಧರನ್ ಮಾಥಿವರನ್ ಹೇಳಿದ್ದಾರೆ.

ಕೆಂಟ್ ಪರ ಕೌಂಟಿ ಕ್ರಿಕೆಟ್ ಪಂದ್ಯಗಳಲ್ಲಿ ಆಡುತ್ತಿರುವ ಮುರಳಿ ಅವರು ಲಂಕಾಷೈರ್ ವಿರುದ್ಧ ನಡೆದ ಪಂದ್ಯದಲ್ಲಿ ಸತತ 33 ಓವರುಗಳ ಬೌಲಿಂಗ್ ಮಾಡಿದ ನಂತರ ಕೈನೋವು ಎಂದು ಡ್ರೆಸ್ಸಿಂಗ್ ರೂಮ್‌ಗೆ ಮರಳಿದರು ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ