ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ

ಗುರುವಾರ, 29 ಜನವರಿ 2015 (15:50 IST)
ತ್ರಿಕೋನ ಏಕದಿನ ಸರಣಿಯಲ್ಲಿ ರೋಹಿತ್‌ ಶರ್ಮಾ ಅವರನ್ನು ಆಡಿಸದಿರಲು ಟೀಂ ಇಂಡಿಯಾ ಆಡಳಿತ ಮಂಡಳಿ ನಿರ್ಧರಿಸಿದೆ.
 
ರೋಹಿತ್‌ ಶರ್ಮಾ ಸದ್ಯ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಮುಂದಿನ ವಿಶ್ವಕಪ್‌ನಲ್ಲಿ ಆಡಬೇಕಿದೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯದ ಬಗ್ಗೆ ತಂಡ ತೀವ್ರ ಕಾಳಜಿ ಹೊಂದಿದೆ. ಹೀಗಾಗಿ ಪರ್ಥ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ತ್ರಿಕೋನ ಏಕದಿನ ಪಂದ್ಯದಲ್ಲಿ ಅವರನ್ನು ಆಡಿಸದಿರಲು ನಿರ್ಧರಿಸಲಾಗಿದೆ. 
 
ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯದಲ್ಲಿ ಅವರು 138ರನ್‌ ಹೊಡೆದಿದ್ದರು. ಜ.30 ರಂದು ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ಮಾಡುಇಲ್ಲವೆ ಮಡಿ ಪಂದ್ಯ ಈ ವೇಳೆ ರೋಹಿತ್‌ ಶರ್ಮಾ ಇಲ್ಲದಿರುವುದು ತಂಡಕ್ಕೆ ದೊಡ್ಡ ನಷ್ಟವಾಗಿದೆ.
 

ವೆಬ್ದುನಿಯಾವನ್ನು ಓದಿ