ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಟೀಂ ಇಂಡಿಯಾಗೆ ಹೊಸ ನಿರ್ದೇಶಕರನ್ನು ನೇಮಿಸಲಾಗಿದೆ. ಇಂಗ್ಲೆಂಡ್ ವಿರುದ್ಧ 5 ಏಕದಿನ ಪಂದ್ಯಗಳಿಗೆ ತಂಡದ ನಿರ್ದೇಶಕರಾಗಿ ರವಿಶಾಸ್ತ್ರಿ ನೇಮಕವಾಗಿದ್ದಾರೆ. ಬಿಸಿಸಿಐ ಬೌಲಿಂಗ್ ಮತ್ತು ಬ್ಯಾಟಿಂಗ್ ಕೋಚ್ಗಳಿಬ್ಬರಿಗೂ ವಿಶ್ರಾಂತಿ ನೀಡಿ, ರಜೆ ಮೇಲೆ ತೆರಳಲು ಸೂಚಿಸಿದೆ.
ತಂಡದ ಸಹಾಯಕ ಕೋಚ್ಗಳನ್ನಾಗಿ ಸಂಜಯ್ ಬಂಗಾರ್, ಭರತ್ ಅರುಣ್ ಮತ್ತು ಶ್ರೀಧರ್ ಅವರನ್ನು ನೇಮಿಸಲಾಗಿದೆ. ಟೀಂ ಇಂಡಿಯಾ ವಿದೇಶಿ ನೆಲದಲ್ಲಿ ಅನುಭವಿಸುತ್ತಿರುವ ಸತತ ಸೋಲಿನಿಂದಾಗಿ ವ್ಯಾಪಕ ಟೀಕಾಪ್ರವಾಹ ಹರಿದುಬರುತ್ತಿದ್ದು, ಧೋನಿಯನ್ನು ನಾಯಕತ್ವದಿಂದ ತೆಗೆಯಬೇಕೆಂಬ ಕೂಗು ಕೇಳಿಬರುತ್ತಿದೆ.